ಎಸ್.ಜಿ.ಬಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 9 ವಾರ್ಷಿಕ ಕ್ರೀಡಾಕೂಟ.
ಇಂಡಿ. ನಗರದ ಎಸ್.ಜಿ.ಬಿ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ 9 ವಾರ್ಷಿಕ ಕ್ರೀಡಾಕೂಟವನ್ನು ಆಯೋಜಿಸಲಾಯಿತು. ವಾರ್ಷಿಕ ಕ್ರೀಡಾಕೂಟವನ್ನು ಖ್ಯಾತ ಉದ್ಯಮಿಗಳು ಹಾಗೂ ಮಾಜಿ ಪುರಸಭೆ ಸದಸ್ಯರಾದ ಜೈನುದ್ದಿನ ಬಾಗವಾನ ಉದ್ಘಾಟಿಸಿ ಮಾತನಾಡಿ ಮಕ್ಕಳಿಗೆ ವಿದ್ಯಾಭ್ಯಾಸ ಜೋತೆಗೆ ಕ್ರೀಡಾ ಚಟುವಟಿಕೆಗಳು ಅಗತ್ಯ. ಹಾಗೂ ದೈಹಿಕ ಬೆಳವಣಿಗೆಗೆ ಕ್ರೀಡೆಗಳು ಅತ್ಯಂತ ಸಹಕಾರ ಎಂದು ಹೇಳಿದರು. ಮುಖ್ಯ ಅಥಿತಿಗಳಾಗಿ ಆಗಮಿಸಿದ ಖಲೀಲ ಇಂಡಿಕರ ಇಂದಿನ ಯುವ ಜನಾಂಗ ಕ್ರೀಡಾ ಮನೋಭಾವನೆ ಬೆಳಿಸಿಕೊಳ್ಳಬೇಕು, ಮೊಬೈಲ್ ಬಳಕೆ ಕಡಿಮೆಮಾಡಿಕೊಂಡು ಅದರಿಂದ ಆಗುವ ದುಷ್ಪರಿಣಾಮಯಿಂದ ದೂರವಿರಿ ಎಂದು ತಿಳಿಸಿದರು. ಮಾಜಿ ಸೈನಿಕರಾದ ರಜಾಕಸಾಬ ಬಾಗವಾನ ಮಾತನಾಡಿ ಕ್ರೀಡೆಗಳು ಮನೋರಂಜನ ಹಾಗೂ ದೇಹದಾಡ್ಯತೆಗೆ ಉತ್ತಮ. ದೈಹಿಕ ಆರೋಗ್ಯಕಾರಿ ಚಟುವಟಿಕೆಗಳು ಅತ್ಯವಶ್ಯಕವಾಗಿದೆ ಎಂದರು. ನೂತನ ವಾಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ವಿಜಯಪುರಕ್ಕೆ ಆಯ್ಕೆಯಾಗಿರುವ ಸದ್ದಾಂ ಹುಸೇನ್ ಜಮಾದಾರ ಕಾರ್ಯಕ್ರಮದ ಉದ್ದೇಶಿಸಿ ಮಾತನಾಡಿ, ಕ್ರೀಡೆಗಳು ಶಾರೀರಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಅತ್ಯಂತ ಅಗತ್ಯವಾಗಿದ್ದು, ಶಿಸ್ತು, ಸಹಕಾರ ಮತ್ತು ನಾಯಕತ್ವ ಗುಣಗಳನ್ನು ಬೆಳೆಸುತ್ತವೆ ಎಂದು ಹೇಳಿದರು. ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕ್ರೀಡಾಕೂಟಗಳಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು. ಈ...